ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಟಿಯಾಲ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು (Navjot Singh Sidhu) ಶನಿವಾರ ಬಿಡುಗಡೆಯಾಗಲಿದ್ದಾರೆ ಎಂದು ಪಂಜಾಬ್ (Punjab) ಮಾಜಿ ಸಚಿವರ ಅಧಿಕೃತ ಹ್ಯಾಂಡಲ್ನ ಟ್ವಿಟರ್ ನಲ್ಲಿ ಮಾಹಿತಿ ನೀಡಿದೆ.
ಸರ್ದಾರ್ ನವಜೋತ್ ಸಿಂಗ್ ಸಿಧು ಅವರು ನಾಳೆ ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಈ ಮೂಲಕ ಎಲ್ಲರಿಗೂ ತಿಳಿಸುತ್ತಿದ್ದೇವೆ ಎಂದು ಎಂದು ಟ್ವೀಟ್ ನಲ್ಲಿ ಹೇಳಲಾಗಿದೆ.
ರಸ್ತೆ ರಂಪಾಟ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಿಂದ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾದ ನಂತರ ಕಳೆದ ವರ್ಷ ಮೇ 20 ರಂದು ಜೈಲು ಶಿಕ್ಷೆಗೊಳಗಾದ ಸಿಧು ಅವರ ಒಳ್ಳೆಯ ನಡವಳಿಕೆಯಿಂದ ಅವಧಿಗೆ ಮುನ್ನ ಬಿಡುಗಡೆ ಮಾಡಲಾಗುತ್ತಿದೆ ಎಂದು ಜೈಲು ಅಧಿಕಾರಿಗಳನ್ನು ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಅವರು ಮೇ 16 ರಂದು ಬಿಡುಗಡೆಯಾಗಬೇಕಿತ್ತು .
ಡಿಸೆಂಬರ್ 27, 1988 ರಂದು, ಸಿಧು ಮತ್ತು ಅವರ ಸ್ನೇಹಿತ ರೂಪಿಂದರ್ ಸಿಂಗ್ ಸಂಧು, 65 ವರ್ಷದ ಗುರ್ನಾಮ್ ಸಿಂಗ್ ಎಂಬ ವ್ಯಕ್ತಿಯೊಂದಿಗೆ ಜಗಳವಾಡಿದರು. ಕೋಪದ ಭರದಲ್ಲಿ ಸಿಧು ಗುರ್ನಾಮ್ ಸಿಂಗ್ ನನ್ನು ಥಳಿಸಿ ಸ್ಥಳದಿಂದ ಪರಾರಿಯಾಗಿದ್ದರು. ಇದಾದ ನಂತರ ಗುರ್ನಾಮ್ ಸಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.