ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಮ್ ಆದ್ಮಿ ಪಕ್ಷ ತನ್ನ ಚುನಾವಣಾ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು , ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮೂರು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಕಾರವಾರ ಅಂಕೋಲಾ ಕ್ಷೇತ್ರದಿಂದ ಆಶಿಷ್ ಗಾಂವಕರ್, ಕುಮಟಾ ಕ್ಷೇತ್ರದಿಂದ ರೂಪಾ ನಾಯ್ಕ ಮತ್ತು ಭಟ್ಕಳ ವಿಧಾನಸಭಾ ಕ್ಷೇತ್ರದಿಂದ ನಸೀಮ ಅಹ್ಮದ್ ಖಾನ್ ಅವರ
ಹೆಸರು ಆಪ್ ಬಿಡುಗಡೆ ಮಾಡಿರುವ 60 ಕ್ಷೇತ್ರಗಳ ಚುನಾವಣಾ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಕಂಡು ಬಂದಿದೆ.
ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾದ ಮೊದಲ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಶಿ ಕ್ಷೇತ್ರದಲ್ಲಿ ಮಾತ್ರ ಹೀತೇಂದ್ರ ನಾಯಕ ಅವರನ್ನು ಅಭ್ಯರ್ಥಿ ಎಂದು ಆಮ್ ಆದ್ಮಿ ಪಕ್ಷ ಪ್ರಕಟಿಸಿತ್ತು ಇದೀಗ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಆಪ್ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.