ನಳಿನ್‌ ಕುಮಾರ್‌ ಕಟೀಲ್ ಉಪಸ್ಥಿತಿಯಲ್ಲಿ ಶಿವರಾಮೇಗೌಡ ಬೆಂಬಲಿಗರು ಬಿಜೆಪಿ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:‌ 

ಬೆಂಗಳೂರಿನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮತ್ತಷ್ಟು ಮಂದಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ನಾಗಮಂಗಲ ಕ್ಷೇತ್ರದ ಮಾಜಿ ಸಂಸದ ಶಿವರಾಮೇಗೌಡ ಜೊತೆಗೆ ಅವರ ಬೆಂಬಲಿಗರು ಕೂಡ ಬಿಜೆಪಿ ಕದ ತಟ್ಟಿದ್ದು, ಅಧಿಕೃತವಾಗಿ ಕಮಲವನ್ನು ಹಿಡಿದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಮಂಡ್ಯದ ಮಾಜಿ ಸಂಸದ ಎಲ್.‌ ಆರ್. ಶಿವರಾಮೇ ಗೌಡ, ಪ್ರಮುಖರಾದ ಯೋಗೇಶ್ ಬೆಸ್ತದ್, ರಾಮಪ್ಪ, ಮಂಜು ಹಾಗೂ ಅವರ ಬೆಂಬಲಿಗರು ಬಿಜೆಪಿ‌ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ. ಟಿ. ರವಿ, ಸಚಿವರಾದ ಡಾ. ಕೆ. ಸುಧಾಕರ್‌, ಕೆ. ಗೋಪಾಲಯ್ಯ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!