March 25, 2026
Wednesday, March 25, 2026
spot_img

WEATHER | ರಾಜ್ಯಕ್ಕೆ ಶೀತದ ಅಲೆಯ ಎಚ್ಚರಿಕೆ! ಬೆಳಗಾವಿ ಸೇರಿ 17 ಜಿಲ್ಲೆಗಳು ತತ್ತರ

ರಾಜ್ಯದಲ್ಲಿ ಹಲವು ದಿನಗಳಿಂದ ಮುಂದುವರೆದಿರುವ ಶುಷ್ಕ ವಾತಾವರಣದ ಮಧ್ಯೆಯೇ, ಮೈ ಕೊರೆಯುವ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ಶೀತದ ಅಲೆ’ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರ್ನಾಟಕದಾದ್ಯಂತ ತಾಪಮಾನವು ಗಣನೀಯವಾಗಿ ಇಳಿಕೆಯಾಗಲಿದೆ. ನಿರ್ದಿಷ್ಟವಾಗಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ತೀವ್ರ ಶೀತದ ಅಲೆ ಕಂಡುಬರುವ ಸಾಧ್ಯತೆ ಹೆಚ್ಚು.

ಹೆಚ್ಚು ಪ್ರಭಾವಿತ ಜಿಲ್ಲೆಗಳು: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ ಮತ್ತು ವಿಜಯನಗರ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರೆಯಲಿದೆ. ಒಟ್ಟಾರೆಯಾಗಿ, ರಾಜ್ಯಾದ್ಯಂತ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದು, ನಾಗರಿಕರು ಈ ಶೀತದ ಅಲೆಯ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !