Saturday, December 13, 2025

ಶಾಸಕ ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಬೇಡಿ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮಾತ್ರ ನಿಲ್ಲುತ್ತಿಲ್ಲ. ದಿನಕ್ಕೊಬ್ಬರ ಹೇಳಿಕೆ ನಾನಾ ಊಹಾಪೋಹ ಸೃಷ್ಟಿಸುತ್ತಿವೆ. ಇದೀಗ ಡಿಕೆ ಶಿವಕುಮಾರ್​ ಆಪ್ತ ಇಕ್ಬಾಲ್ ಹುಸೇನ್, ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ನಾಯಕತ್ವ ಬದಲಾವಣೆ ಚರ್ಚೆಗೆ ದೊಡ್ಡ ತಿರುವು ಕೊಟ್ಟಿದ್ದಾರೆ.

ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್​, ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಲು ಹೋಗಬೇಡಿ. ಅವನ ಮೇಲೆ ಮೊದಲು ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ದೇವನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಇಕ್ಬಾಲ್​ ಹುಸೇನ್​ಗೆ​ ಮಾತಿನ ಚಟ. ಯಾರು ಅವನ ಮಾತನ್ನು ನಂಬಲು ಹೋಗಬೇಡಿ ಎಂದು ಸಿಡಿಮಿಡಿಗೊಂಡಿದ್ದಾರೆ.

ಇನ್ನು ಶಾಸಕ ಇಕ್ಬಾಲ್ ಹುಸೇನ್​ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 140 ಶಾಸಕರಿಗೂ ಡಿ.ಕೆ.ಶಿವಕುಮಾರ್​ ಅಧ್ಯಕ್ಷರು. ಮೊದಲು ನೋಟಿಸ್​ ಕೊಟ್ಟಿದ್ದಾರೆ, ಈಗಲೂ ಒಂದೆರಡು ಕೊಡಲಿ. ನೋಟಿಸ್​ ಕೊಟ್ಟರೆ ನಾನು ಪಾಲನೆ ಮಾಡಬೇಕಾಗುತ್ತೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

error: Content is protected !!