ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 12ರಿಂದ ಸಂಜೆ 5ರ ತನಕ ಹೊರಾಂಗಣ ಕಾರ್ಯಕ್ರಮಕ್ಕೆ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಹಾರಾಷ್ಟ್ರದಲ್ಲಿ ಭಾನುವಾರದಂದು ನಡೆದ ಸಮಾವೇಶವೊಂದರಲ್ಲಿ ಭಾಗವಹಿಸಿದ್ದವರಲ್ಲಿ 13 ಮಂದಿ ಬಿಸಿಲ ತಾಪ ತಾಳಲಾರದೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮಹಾರಾಷ್ಟ್ರ ಸರ್ಕಾರ ಮಹತ್ವದ ಸೂಚನೆಯನ್ನು ನೀಡಿದೆ. ಬಿಸಿಲಿನ ತಾಪ ಕಡಿಮೆಯಾಗುವವರೆಗೆ ಮಧ್ಯಾಹ್ನ 12 ರಿಂದ ಸಂಜೆ 5ರ ವರೆಗೆ ಯಾವುದೇ ಹೊರಾಂಗಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ ಎಂದು ಹೇಳಿದೆ.

ಈ ವರ್ಷ ಹೋರಾಟಗಾರ ಅಪ್ಪಾಸಾಹೇಬ ಧರ್ಮಾಧಿಕಾರಿಗೆ ಪ್ರಶಸ್ತಿಯನ್ನು ನೀಡಲಾಯಿತು ಮತ್ತು ಅವರ ಲಕ್ಷಾಂತರ ಅನುಯಾಯಿಗಳು ತೆರೆದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಂದು ಆ ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್​ನಷ್ಟಿತ್ತು.

ಸಮಾರಂಭದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಧರ್ಮಾಧಿಕಾರಿಗೆ ಹಸ್ತಾಂತರಿಸಲು ಸಮಾರಂಭಕ್ಕೆ ಆಗಮಿಸಿದ್ದರು.

ಆದರೆ ಪ್ರತಿಪಕ್ಷಗಳು ಕಾರ್ಯಕ್ರಮದ ಆಯೋಜನೆಯಲ್ಲಾಗಿರುವ ಲೋಪಗಳ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಬಿಸಿಲು ತೀವ್ರವಾಗಿ ಹೆಚ್ಚಾಗುತ್ತಿರುವುದು ಶಿಶುಗಳು, ವೃದ್ಧರು ಹಾಗೂ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಇದರಿಂದ ಪಾರಾಗಲು ಬಾಯಾರಿಕೆಯಾಗದಿದ್ದರೂ ಹೆಚ್ಚಿನ ನೀರು ಕುಡಿಯುವುದು, ಒಆರ್ ಎಸ್ ಅಥವಾ ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಕುಡಿಯುವುದು ಸೇರಿದಂತೆ ಹಲವು ಕ್ರಮಗಳನ್ನು ಅನುಸರಿಸುವ ಮೂಲಕ ಬಿಸಿಲಿನಿಂದಾಗುವ ಪರಿಣಾಮಗಳಿಂದ ತಪ್ಪಿಸಿಕೊಳ್ಳಬೇಕು ಎಂದು ಐಎಂಪಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!