ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.
ನಿತೇಶ್(14), ಪ್ರಜ್ವಲ್(13) ಮೃತ ದುರ್ದೈವಿಗಳು. ಮಕ್ಕಳಿಬ್ಬರೂ ಮನೆ ಮೇಲೆ ಆಟವಾಡುತ್ತಿದ್ದಾಗ ತಂತಿ ತಗುಲಿ ಈ ದುರಂತ ಸಂಭವಿಸಿದ್ದು, ಕೆಇಬಿ(KEB) ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.