ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸುತ್ತಿದೆ. ಆದರೆ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದ್ದು ಯಾರ ಸಹಾಯವೂ ಇಲ್ಲದೆ ಸರ್ಕಾರ ರಚನೆಯಾಗಲಿದೆ ಎಂದಿದ್ದಾರೆ.
ಇಂದಿನಿಂದ ಚುನಾವಣೆ ಮುಗಿಯುವವರೆಗೂ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತೇನೆ. ಯಾರ ಬೆಂಬಲವೂ ಬೇಡ. ಈ ಬಾರಿ ಯಾರ ಬೆಂಬಲವಿಲ್ಲದೆ ರಾಜ್ಯದಲ್ಲಿ ಸರ್ಕಾರ ಮಾಡುವುದು ಖಚಿತ ಎಂದು ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಿಕ್ಕೆ ಬರುವುದಾಗಿ ತಿಳಿಸಿದ್ದಾರೆ.