ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್ಗಢದಲ್ಲಿ ದಾಂತೆವಾಡಾ ಜಿಲ್ಲೆಯಲ್ಲಿ ನಕ್ಸಲರ ಐಇಡಿ ಸ್ಫೋಟದಲ್ಲಿ ಸಾವನ್ನಪ್ಪಿದ 10 ಜನ ಮೀಸಲು ಪೊಲೀಸರಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮೂಲಕ ಸಂತಾಪ ವ್ಯಕ್ತ ಪಡಿಸಿದರುವ ಪ್ರಧಾನಿ, ಯೋಧರ ಮೇಲೆ ನಡೆದ ದಾಳಿಯನ್ನ ಬಲವಾಗಿ ಖಂಡಿಸುತ್ತೇನೆ.ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಧೈರ್ಯಶಾಲಿ ಸಿಬ್ಬಂದಿಗೆ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.’ಅವರ ತ್ಯಾಗ ಸದಾ ನೆನಪಿನಲ್ಲಿ ಉಳಿಯಲಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು’ ಎಂದು ಹೇಳಿದ್ದಾರೆ.
Strongly condemn the attack on the Chhattisgarh police in Dantewada. I pay my tributes to the brave personnel we lost in the attack. Their sacrifice will always be remembered. My condolences to the bereaved families.
— Narendra Modi (@narendramodi) April 26, 2023
ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ ಡಿಆರ್ಜಿ ಯೋಧರು ಮತ್ತು ಒಬ್ಬ ನಾಗರಿಕ ಸೇರಿದಂತೆ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ.