March 26, 2026
Thursday, March 26, 2026
spot_img

ಶಿವಾಜಿ ವೀರ ಯೋಧ ಮಾತ್ರವಲ್ಲ, ಸಮಾನತೆ-ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ನಾಯಕ: ಸತೀಶ್ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಾಜಿ ಕೇವಲ ಒಬ್ಬ ವೀರ ಯೋಧ ಮಾತ್ರವಲ್ಲ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ನಾಯಕರಾಗಿದ್ದರು ಎಂಬುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಅಥಣಿಯಲ್ಲಿ ಇಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಅಶ್ವಾರೂಢ ಮೂರ್ತಿ ಲೋಕಾರ್ಪಣೆಗೊಳಿಸಿದ ನಂತರ ಜರುಗಿದ ಭಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶಿವಾಜಿ ಮಹಾರಾಜರ ನೈಜ ಇತಿಹಾಸ ಮತ್ತು ತತ್ವ ಸಿದ್ದಾಂತಗಳ ಕುರಿತು ಮಾತನಾಡಿದರು.

ಶಿವಾಜಿ ಮಹಾರಾಜರು ಕೇವಲ ಒಬ್ಬ ವೀರ ಯೋಧ ಮಾತ್ರವಲ್ಲ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ನಾಯಕರಾಗಿದ್ದರು. ಅವರ ಸ್ವರಾಜ್ಯ ಎಂಬ ಚಿಂತನೆಯಡಿ ಸಮಾನತೆ, ಸಾಮಾಜಿಕ ನ್ಯಾಯ, ಧರ್ಮ ಸಹಿಷ್ಣುತೆ ಮತ್ತು ಜನಕಲ್ಯಾಣವೇ ಅವರ ಆಡಳಿತದ ಮೂಲ ಸಿದ್ಧಾಂತಗಳಾಗಿದ್ದವು. ಎಲ್ಲಾ ವರ್ಗಗಳನ್ನೂ ಒಗ್ಗೂಡಿಸಿ, ನ್ಯಾಯಯುತ ಮತ್ತು ಶಕ್ತಿಶಾಲಿ ರಾಜ್ಯವನ್ನು ನಿರ್ಮಿಸಿದ ಅವರ ದೃಷ್ಟಿ ಇಂದಿಗೂ ಪ್ರೇರಣೆಯಾಗಿಯೇ ಉಳಿದಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !