ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಚುನಾವಣೆ ಕಣ ರಂಗೇರಿದೆ. ನಿನ್ನೆ ಕಾಂಗ್ರೆಸ್ ಪಕ್ಷದಿಂದ ( Congress Party ) ಬಿಜೆಪಿ ಪಕ್ಷದ ಭ್ರಷ್ಟಾಚಾರದ ರೇಡ್ ಕಾರ್ಡ್ ಬಿಡುಗಡೆ ಮಾಡಲಾಗಿತ್ತು.
ಈ ಸಂಬಂಧ ಚುನಾವಣಾ ಆಯೋಗವು ( Election Commission ), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಿದೆ.ರೇಟ್ ಕಾರ್ಡ್ ಆರೋಪದ ಬಗ್ಗೆ ಪುರಾವೆ ಸಲ್ಲಿಸುವಂತೆ ಸೂಚಿಸಿದೆ.
ಈ ಕುರಿತಂತೆ ಚುನಾವಣಾ ಆಯೋಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ನೋಟಿಸ್ ನಲ್ಲಿ, ನೇಮಕಾತಿಗಳು ಮತ್ತು ವರ್ಗಾವಣೆಗಳು, ಉದ್ಯೋಗಗಳು ಮತ್ತು ಆಯೋಗಗಳ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ದರಗಳ ಪ್ರಾಯೋಗಿಕ ಪುರಾವೆಗಳನ್ನು ಒದಗಿಸಲು ಕಾಂಗ್ರೆಸ್ ಗೆ ಮೇ 7 ರಂದು ಸಂಜೆ 7 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.