ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ: ಮಲೆನಾಡಿನಲ್ಲಿ ಕಮಲ ರಣಕಹಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನಲ್ಲಿ ರೋಡ್‌ ಶೋ ಬಳಿಕ ಪ್ರಧಾನಿ ಮೋದಿಯವರು ಮಲೆನಾಡಿನತ್ತ ತಮ್ಮ ಚಿತ್ತವನ್ನು ಹರಿಸಿದ್ದಾರೆ. ಶಿವಮೊಗ್ಗದ ಆಯನೂರಿನಲ್ಲಿ ಬೃಹತ್‌ ಪ್ರಚಾರ ಸಭೆಯಿದ್ದು, ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಇಲ್ಲಿಂದ ಹೆಲಿಕಪ್ಟಾರ್​ ಮೂಲಕ ಆಯನೂರಿಗೆ ತೆರಳಲಿದ್ದಾರೆ. ಅಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು (ಮೇ.07)ಮಲೆನಾಡು ಶಿವಮೊಗ್ಗದ ಆಯನೂರಿನಲ್ಲಿ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆ ಮಧ್ಯಾಹ್ನ ಬೃಹತ್ ಸಮಾವೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಪ್ರಧಾನಿ ಮೋದಿಯವರಿಗೆ ಬಜರಂಗಬಲಿ ಆಕೃತಿ ಗಿಫ್ಟ್ ಕೊಡಲು ಜಿಲ್ಲಾ ಬಿಜೆಪಿ ಘಟಕ ಸಿದ್ದವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!