ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಕರ್ನಾಟಕದ ಜನತೆಗೆ ಗ್ಯಾರಂಟಿ ನೀಡುತ್ತಿದ್ದಾರೆ.. ಆದರೆ ರಾಹುಲ್ ಗಾಂಧಿಯ ಗ್ಯಾರಂಟಿ ಯಾರು ತೆಗೆದುಕೊಳ್ಳುತ್ತಾರೆ. ರಾಹುಲ್ ಗಾಂಧಿಯನ್ನು ನಿಲ್ಲಿಸಲು ಸೋನಿಯಾ ಗಾಂಧಿ ಕಳೆದ 20 ವರ್ಷಗಳಿಂದ ಏಕಾಂಗಿಯಾಗಿ ಹೋರಾಡುತ್ತಿದ್ದಾರೆ. ಈಗ ಈ ವ್ಯಕ್ತಿ ಕರ್ನಾಟಕದ ಜನತೆಗೆ ಭರವಸೆ ನೀಡುತ್ತಾರಾ..?ಎಂದು ಪ್ರಶ್ನಿಸಿದರು.
ನಮ್ಮ ನಾಡು ಮತ್ತು ಧರ್ಮದ ರಕ್ಷಣೆಗಾಗಿ ನಮ್ಮ ವೀರರು ಮಾಡಿದ ತ್ಯಾಗವನ್ನು ಗುರುತಿಸುವ ಭಾರತದ ಹೊಸ ಇತಿಹಾಸ ನಮಗೆ ಬೇಕು ಎಂದು ಟ್ವೀಟ್ ಮಾಡಿದ್ದಾರೆ. ಶನಿವಾರ ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಟಿಪ್ಪು ಕುಟುಂಬದವರು ಎಂದು ಬಣ್ಣಿಸಿದರು. ಟಿಪ್ಪು ಸುಲ್ತಾನ್ನನ್ನು ಕೊಡುಗು ಜನ ಕೂಡ ಹಲವು ಬಾರಿ ಸೋಲಿಸಿದ್ದಾರೆ ಎಂದರು. ಟಿಪ್ಪು ಜಯಂತಿ ಆಚರಿಸಲು ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಹೋಗುವಂತೆ ಸೂಚಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಮತ್ತೆ ಪಿಎಫ್ಐ ಕೇಂದ್ರವಾಗಲಿದೆ ಎಂದರು.