ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಜನತಾ ಪಕ್ಷದ ನಾಯಕಿ ಪತಿಯನ್ನು ಸಮಾಜವಾದಿ ಪಕ್ಷದ ಶಾಸಕರೊಬ್ಬರು ಥಳಿಸಿದ್ದಾರೆ. ಅದೂ ಪೊಲೀಸ್ ಠಾಣೆಯಲ್ಲಿ ಎಲ್ಲರ ಮುಂದೆ. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಲ್ಲೆ ನಡೆಸುತ್ತಿದ್ದಾಗ ಪೊಲೀಸರು ಸೇರಿದಂತೆ ಕೆಲವರು ತಡೆಯಲು ಯತ್ನಿಸಿದರೂ ಕಿವಿಗೊಡಲಿಲ್ಲ.
ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಗೌರಿಗಂಜ್ ಕೊತ್ವಾಲಿ ಪೊಲೀಸ್ ಠಾಣೆಯ ಬಿಜೆಪಿ ಮುನ್ಸಿಪಲ್ ಚುನಾವಣಾ ಅಭ್ಯರ್ಥಿ ರಶ್ಮಿ ಸಿಂಗ್ ಅವರ ಪತಿ ದೀಪಕ್ ಸಿಂಗ್ ಮೇಲೆ ಸಮಾಜವಾದಿ ಪಕ್ಷದ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಹಲ್ಲೆ ನಡೆಸಿದ್ದಾರೆ. ಸಮಾಜವಾದಿ ಪಕ್ಷದ ನಾಯಕ ರಾಕೇಶ್ ಪ್ರತಾಪ್ ಸಿಂಗ್ ಅವರ ಪ್ರಕಾರ, ದೀಪಕ್ ಸಿಂಗ್ ಅವರು ಪೊಲೀಸ್ ಠಾಣೆಗೆ ಬಂದು ಪ್ರತಿಭಟನೆಯ ಸಮಯದಲ್ಲಿ ಅವರನ್ನು ನಿಂದಿಸಿದ್ದರಿಂದ ತಾಳ್ಮೆ ಕಳೆದುಕೊಂಡು ಹಲ್ಲೆಗೆ ಕಾರಣವಾಯಿತು ಎಂದರು.
ದೀಪಕ್ ಸಿಂಗ್ ಸೇರಿದಂತೆ ಅವರ ಬೆಂಬಲಿಗರು ತಮ್ಮ ಕೆಲವು ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದರಿಂದ ಅವರು ಪ್ರತಿಭಟನೆ ನಡೆಸಿದ್ದು, ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ರಾಕೇಶ್ ಪ್ರತಾಪ್ ಸಿಂಗ್ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಶಾಸಕ ಮತ್ತು ಅವರ ಬೆಂಬಲಿಗರು ನಿಂದನೆ ಜೋರಾಗಿತ್ತು. ಪರಿಸ್ಥಿತಿ ಹಠಾತ್ತನೆ ಕೈ ಮೀರಿದ್ದು, ನೋಡ ನೋಡುತ್ತಲೇ ದಾಳಿಯಲ್ಲಿ ಇಬ್ಬರು ನಾಯಕರು ಸಿಕ್ಕಿಬಿದ್ದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದೀಗ ಸಮಸ್ಯೆ ಬಗೆಹರಿದಿದ್ದು, ಇಬ್ಬರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
यूपी | अमेठी
BJP नेता टशन में उतरा, सपा विधायक ने पीट दिया.
यह संग्राम कोतवाली में हुआ. pic.twitter.com/MTb5HnqDIh
— Ranvijay Singh (@ranvijaylive) May 10, 2023