ವೋಟ್ ಮುಗಿದ ಬೆನ್ನಿಗೆ ಮಂಗಳೂರಿನಲ್ಲಿ ಘರ್ಷಣೆ: ಮಿಥುನ್ ರೈ ವಾಹನಕ್ಕೆ ಹಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ಕರ್ನಾಟಕದ ಮತದಾನದ ಮುಗಿದ ಬೆನ್ನಲ್ಲೇ ಮಂಗಳೂರಲ್ಲಿ ಹೊರವಲಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ.ಪರಸ್ಪರ ಕಲ್ಲು ತೂರಾಟ ನಡೆಸಿರೋ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ.

ಗಲಾಟೆಯಲ್ಲಿ ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ದ್ವಂಸವಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಕಲ್ಲು ತೂರಾಟದ ವೇಳೆ ಪೊಲೀಸ್ ಸಿಬ್ಬಂದಿ ತಲೆಗೆ ಸಹ ಗಾಯವಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!