ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಮಧ್ಯರಾತ್ರಿಯೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಆರು ತಿಂಗಳಿನಿಂದ ಎಲೆಕ್ಷನ್ ಕೆಲಸಗಳಲ್ಲಿ ಬ್ಯುಸಿ ಇದ್ದ ಎಚ್ಡಿಕೆ, ಇದೀಗ ರೆಸ್ಟ್ ಮಾಡೋದಕ್ಕಾಗಿ ಎರಡು ದಿನದ ಮಟ್ಟಿಗೆ ಸಿಂಗಾಪುರಕ್ಕೆ ತೆರಳಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿಂಗಾಪುರದತ್ತ ಪ್ರಯಾಣ ಬೆಳೆಸಿದ್ದು, ಫಲಿತಾಂಶದ ದಿನ ವಾಪಾಸಾಗಲಿದ್ದಾರೆ.