ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ಮೇ 12ರಂದು ಸುಪ್ರೀಂ ಕೋರ್ಟ್ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾವನ್ನು ಯಾಕೆ ನಿಮ್ಮ ರಾಜ್ಯಗಳಲ್ಲಿ ನಿಷೇಧಿಸಲಾಗಿದೆ ಎಂದು ನೋಟಿಸ್ ನೀಡಿತ್ತು .
ಇದೀಗ ಈ ನೋಟಿಸ್ಗೆ ಉತ್ತರಿಸಿದ ತಮಿಳುನಾಡು ಸರ್ಕಾರ, ದಿ ಕೇರಳ ಸ್ಟೋರಿ ಬಿಡುಗಡೆಗೊಂಡು 2 ದಿನವಾದರು ಸಿನಿಮಾ ನೋಡಲು ಯಾರು ಬರುತ್ತಿಲ್ಲ ಎಂಬ ಕಾರಣಕ್ಕೆ ರಾಜ್ಯಾದ್ಯಂತ ಥಿಯೇಟರ್ ಮಾಲೀಕರು ಈ ಕ್ರಮಕ್ಕೆ ಬಂದಿದ್ದಾರೆ ಎಂದು ಉತ್ತರಿಸಿದೆ.
ಮಲ್ಟಿಪ್ಲೆಕ್ಸ್ ಮಾಲೀಕರು ಮೇ7 ರಿಂದ ಚಿತ್ರ ಪ್ರದರ್ಶನವನ್ನು ನಿಲ್ಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಇದಕ್ಕೆ ಕಾರಣ ಪ್ರಸಿದ್ಧ ನಟರ ಕೊರತೆ, ಕಳಪೆ ಪ್ರದರ್ಶನ ಮತ್ತು ಹೆಚ್ಚಾಗಿ ಈ ಚಿತ್ರವನ್ನು ನೋಡು ಜನರೇ ಇರಲಿಲ್ಲ ಎಂದು ತಮಿಳುನಾಡು ಸರ್ಕಾರ ಪತ್ರದಲ್ಲಿ ಉತ್ತರಿಸಿದೆ. ಜತೆಗೆ ಇದು ಹಿಂದಿ ಭಾಷೆಯಲ್ಲಿ ಮೇ 5ರಂದು 19 ಮಲ್ಟಿಪ್ಲೆಕ್ಸ್ಗಳಲ್ಲಿ ಬಿಡುಗಡೆಯಾಗಿದೆ ಎಂದು ಹೇಳಿದೆ.
ಈ ಚಿತ್ರದಲ್ಲಿ ಯಾವುದೇ ಜನಪ್ರಿಯ ನಟರು ಇಲ್ಲ ಅದಕ್ಕಾಗಿ ಕಳಪೆ ಪ್ರದರ್ಶನಗೊಂಡು ಬಾಕ್ಸ್ ಆಫೀಸ್ಗೆ ಭಾರೀ ತೊಂದರೆಯಾಗಿದೆ ಎಂದು ಹೇಳಿದೆ. ಇದರ ಜತೆಗೆ ಈ ಸಿನಿಮಾವನ್ನು ನೋಡಲು ಅಷ್ಟೊಂದು ಜನ ಬಂದಿಲ್ಲ ಎಂದು ಸ್ವತಃ ಚಲನಚಿತ್ರ ಪ್ರದರ್ಶಕರೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಇನ್ನೂ ಈ ಸಿನಿಮಾ ನೋಡು ಜನ ಬರಬೇಕು ಎಂದು ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.