April 10, 2026
Friday, April 10, 2026
spot_img

ದ್ವೇಷ ಭಾಷಣಕ್ಕೆ ‘ಬ್ರೇಕ್’: ಸಮುದಾಯದಲ್ಲಿ ಸಾಮರಸ್ಯ ತರಲು ಹೊಸ ಕಾಯ್ದೆ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಮಹತ್ವದ ಉದ್ದೇಶದಿಂದಲೇ ದ್ವೇಷ ಭಾಷಣ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕಾಯ್ದೆ ಜಾರಿಗೆ ತರುವಲ್ಲಿ ತಮ್ಮ ಸರ್ಕಾರಕ್ಕೆ ಯಾವುದೇ ಸ್ವಾರ್ಥದ ಉದ್ದೇಶವಿಲ್ಲ ಎಂದು ಅವರು ಮಂಗಳವಾರ ಮಾಧ್ಯಮದವರಿಗೆ ತಿಳಿಸಿದರು.

ಸಚಿವರು ಮಾತನಾಡಿ, “ಈ ಕಾಯ್ದೆಯನ್ನು ನಿರ್ದಿಷ್ಟವಾಗಿ ಯಾವುದೇ ಜಾತಿ, ಮತ ಅಥವಾ ಪಂಥವನ್ನು ಗುರಿಯಾಗಿಸಿಕೊಂಡು ರೂಪಿಸಿಲ್ಲ. ಬದಲಾಗಿ, ಸಮುದಾಯಗಳ ನಡುವೆ ಸಾಮರಸ್ಯವನ್ನು ತರುವ ನಿಟ್ಟಿನಲ್ಲಿ ಇದನ್ನು ಜಾರಿಗೆ ತರಲಾಗುತ್ತಿದೆ” ಎಂದರು.

ಸಮಾಜದಲ್ಲಿ ಯಾರೇ ಆಗಲಿ, ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷವೇ ಆಗಲಿ ಶಾಂತಿಯನ್ನು ಕದಡುವಂತಹ ಕೆಲಸ ಮಾಡಬಾರದು. ಸೌಹಾರ್ದಯುತ ವಾತಾವರಣವನ್ನು ನಿರ್ಮಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಕಾಯ್ದೆಯು ಸಮಾಜದ ಒಳಿತಿಗಾಗಿ ಮತ್ತು ಶಾಂತಿಯುತ ಸಹಬಾಳ್ವೆಗಾಗಿ ಇರುವ ಒಂದು ಹೆಜ್ಜೆಯಾಗಿದೆ ಎಂದು ಸಚಿವ ಪಾಟೀಲ್ ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !