ಸಿಎಂ ಸಿದ್ಧರಾಮಯ್ಯಗೆ ಜೀವ ಬೆದರಿಕೆ: FIR ರದ್ದು ಕೋರಿ ಹೈಕೋರ್ಟ್ ಮೊರೆಹೋದ ಅಶ್ವತ್ಥನಾರಾಯಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಕಾಂಗ್ರೆಸ್ ಶಾಸಕ ಡಾ.ಸಿಎನ್ ಅಶ್ವತ್ಥನಾರಾಯಣ ವಿರುದ್ಧ ನೀಡಿದ್ದದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಮೈಸೂರಿನಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ, ಶಾಸಕ ಅಶ್ವತ್ಥನಾರಾಯಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಕಪೋಲ ಕಲ್ಪಿತ ಆರೋಪ ಮಾಡಿ, ನನ್ನ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಮೈಸೂರಿನಲ್ಲಿ ದೂರು ನೀಡಿದ್ದಾರೆ. ಸಿದ್ಧರಾಮಯ್ಯ ಸೋಲಿಸಬೇಕೆಂಬ ಹಿನ್ನಲೆಯಲ್ಲಿ ಹೇಳಿಕ್ಕೆ ನೀಡಿದ್ದೆ. ಆದರೇ ದುರುದ್ದೇಶದಿಂದ ತಮ್ಮ ವಿರುದ್ಧ ಎಫ್‌ಐಆರ್ ಮಾಡಲಾಗಿದೆ ಎಂಬುದಾಗಿ ಅರ್ಜಿಯಲ್ಲಿ ತಿಳಿಸಿದ್ದಾರೆ.

ನನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್ ದುರುದ್ದೇಶದಿಂದ ಕೂಡಿದೆ. ನಾನು ಜೀವ ಬೆದರಿಕೆ ಹಾಕಿದ್ದೇನೆ ಎಂಬುದಾಗಿ ಕಪೋಲ ಕಲ್ಪಿತ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಬೇಕು ಎಂಬುದಾಗಿ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!