ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ.
ಭಾ ಮ ಹರೀಶ್ ನೇತೃತ್ವದ ನಿಯೋಗ ಸಿಎಂ ಅಧಿಕೃತ ನಿವಾಸಕ್ಕೆ ಬಂದು ಸಿಎಂ ಅವರನ್ನು ಭೇಟಿ ಮಾಡಿ, ಕೆಲವು ಬೇಡಿಕೆಗಳನ್ನು ಇಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹರೀಶ್, ಸುಂದರ್ ರಾಜ್, ಜೈಜಗದೀಶ್ ಅವರು ಜೊತೆಯಲ್ಲಿದ್ದು, ಸಾಕಷ್ಟು ಮನವಿಗಳನ್ನು ಮಾಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ಕೆಲವು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದೇವೆ. ಕಂಠೀರವ ಸ್ಟುಡಿಯೋ ಅಧ್ಯಕ್ಷರಿಗೆ ಸಂಬಂಧಿಸಿದ ಚರ್ಚೆಯಾಗಿದ್ದು, ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಭಾ ಮ ಹರೀಶ್ ಹೇಳಿದ್ದಾರೆ.