ನನ್ನಿಂದ ಮಗಳಿಗೂ ಕ್ಯಾನ್ಸರ್​ ಬಂತೆಂದು ನೇಣಿಗೆ ಶರಣಾದ ಅಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತಮ್ಮಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು, ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ತಂದೆ ನೇಣಿಗೆ ಶರಣಾಗಿದ್ದಾರೆ.

ಬೆಂಗಳೂರು ನಗರದ ಅಶೋಕನಗರ ಟ್ರಾಫಿಕ್ ಸ್ಟೇಷನ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ್ (44) ಎಂಬುವವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನವರು. ಅವರು ಕೆಲ ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು.

ಕುಮಾರ್​, ಬೆಂಗಳೂರಿನ‌ ಡೈರಿ ಸರ್ಕಲ್ ಬಳಿಯಿರುವ ಪೊಲೀಸ್ ಕ್ವಾಟ್ರಸ್​ನಲ್ಲಿ ಕುಟುಂಬದ ಜೊತೆ ವಾಸವಿದ್ದರು. ಕೆಲ ಸಮಯದ ಹಿಂದೆ ಕ್ಯಾನ್ಸರ್​ನ ಲಕ್ಷಣಗಳು ಅವರ ಓರ್ವ ಮಗಳಲ್ಲಿಯೂ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಗಳಿಗೆ ಟ್ರೀಟ್​ಮೆಂಟ್​ ಕೊಡಿಸಿದ್ದರು. ಕುಮಾರ್ ಮಗಳು ಇತ್ತೀಚೆಗೆ ಚೇತರಿಸಿಕೊಳ್ಳುತ್ತಿದ್ದರು.

ಆದರೂ, ನನ್ನಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿರುವ ಕುಮಾರ್ ತನ್ನ ಕಣ್ಣುಗಳನ್ನು ದಾನ ಮಾಡಿದ್ದಾರೆ. ಸದ್ಯ ಮೃತದೇಹವನ್ನು ಹುಟ್ಟುರೂ ಚನ್ನಗಿರಿಗೆ ತೆಗೆದುಕೊಂಡು ಹೋಗಲು ಸಿದ್ಧತೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!