ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ಬಿಜೆಪಿ ನಾಯಕರ ಮನೆಗೆ ಬೆಂಕಿ ಹಚ್ಚಲು ಯತ್ನ, ಘರ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದ ಇಂಫಾಲದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ಬಿಜೆಪಿ ನಾಯಕರ ಮನೆಗಳೇ ಟಾರ್ಗೆಟ್ ಆಗಿವೆ. ಬಿಜೆಪಿ ನಾಯಕರ ಮನೆಗಳಿಗೆ ಬೆಂಕಿ ಹಚ್ಚಲು ಗುಂಪೊಂದು ಪ್ರಯತ್ನಿಸಿದ್ದು, ಈ ವೇಳೆ ಭದ್ರತಾ ಪಡೆ ಹಾಗೂ ಗುಂಪಿನ ನಡುವೆ ಭಾರೀ ಘರ್ಷಣೆಯಾಗಿದೆ.

ಘರ್ಷಣೆಯಲ್ಲಿ ನಾಗರೀಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ವಥಾ ಹಾಗೂ ಕಾಂಗ್ವೈ ಪ್ರದೇಶಗಳಲ್ಲಿ ನಿನ್ನೆ ಸಂಜೆಯಿಂದ ಈಗಿನವರೆಗೂ ಗುಂಡಿನ ದಾಳಿ ನಡೆಯುತ್ತಿದೆ.

ಇಂಫಾಲ್ ವೆಸ್ಟ್‌ನಲ್ಲಿರುವ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶಾರದಾ ದೇವಿ ಅವರ ನಿವಾಸಕ್ಕೆ ಬೆಂಕಿ ಹಚ್ಚಲು ಗುಂಪು ಯತ್ನಿಸಿದ್ದು, ಪೊಲೀಸರು ಹಾಗೂ ಸೇನೆ ಇದನ್ನು ತಡೆದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!