ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾರ್ಥಿಗಳಲ್ಲಿ ನೈತಿಕ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯವಾಗಿದೆ ಎಂದು ಸಚಿವ ಹೆಚ್.ಡಿ. ಮಹದೇವಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳು ವಿದ್ಯಾರ್ಥಿಗಳಿದ್ದಾಗಲೇ ನೈತಿಕ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಲಿ ಎಂಬ ಕಾರಣಕ್ಕೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ ಮಾಡಲಾಗಿದೆ. ಒಂದು ನಿಮಿಷದ ಸಂವಿಧಾನದ ಪೀಠಿಕೆ ಓದು ಸಮಾನತೆಯ ಪಾಠ ಕಲಿಸುತ್ತದೆ ಎಂದರು.