ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹೊಸ ನಟ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ನವರಸ ನಾಯಕ ಜಗ್ಗೇಶ್ ಅವಸರದ ನಡಿಗೆಯಿಂದ ಕಾಲು ಮುರಿದುಕೊಂಡಿದ್ದು, ಈ ವಿಷಯವನ್ನು ಜಗ್ಗೇಶ್ ಅವರೇ ಸೋಷಿಯಲ್ ಮೀಡಿಯಾದ ಮೂಲಕ ತಿಳಿಸಿದ್ದಾರೆ.
ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡಿರುವ ಫೋಟೋವನ್ನು ಹಂಚಿಕೊಂಡಿರುವ ಅವರು, “ಸಣ್ಣ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ 6 ವಾರದ ದಿಘ್ಭಂಧನ ನಡಿಗೆಗೆ” ಎಂದು ಬರೆದುಕೊಂಡಿದ್ದಾರೆ.
ಆದಷ್ಟು ಬೇಗ ತಮ್ಮ ನೆಚ್ಚಿನ ನಟ ಗುಣಮುಖರಾಗಲಿ ಎಂದು ಜಗ್ಗೇಶ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮೂಲಕ ಹಾರೈಸಿದ್ದಾರೆ.