ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಂಪರ್ಕ್ ಸೆ ಸಮರ್ಥನ್ ಅಭಿಯಾನದ ಭಾಗವಾಗಿ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಜೂನ್ 27 ರಂದು ಸಂವಾದ ನಡೆಸುವ ಅವಕಾಶ ಸಿಗಲಿದ್ದು, ಇದಕ್ಕಾಗಿ ಫಲಾನುಭವಿಗಳ ಜೊತೆ ಹೆಚ್ಚಿನ ವಿಡಿಯೋ ಅಥವಾ ಸೆಲ್ಫಿ ತೆಗೆದು ಕಳುಹಿಸಬೇಕು. ಈ ಬಗ್ಗೆ ಬಿಜೆಪಿ ಕರ್ನಾಟಕವು ಪೋಸ್ಟರ್ ಹಂಚಿಕೊಂಡಿದೆ.
ನನ್ನ ಬೂತ್ ಎಲ್ಲಕ್ಕಿಂತಲೂ ಬಲಿಷ್ಠ ಬೂತ್ ಎಂಬ ಹೆಸರಿನಲ್ಲಿ ಬಿಜೆಪಿ ಹಂಚಿಕೊಂಡ ಪೋಸ್ಟರ್ನಲ್ಲಿ ಇರುವಂತೆ, ಪ್ರಧಾನಮಂತ್ರಿ ಅವರು ಪಕ್ಷದ 10 ಲಕ್ಷ ಬೂತ್ಗಳಲ್ಲಿನ ಲಕ್ಷಾಂತರ ಕಾರ್ಯಕರ್ತರೊಂದಿಗೆ ಜೂ. 27 ರಂದು ಸಂವಾದ ನಡೆಸಲಿದ್ದಾರೆ. ಹೆಚ್ಚಿನ ಸಂಖ್ಯೆಯ ಫಲಾನುಭವಿಗಳ ವಿಡಿಯೋ ಅಥವಾ ಸೆಲ್ಫಿ ತರುವ ಕಾರ್ಯಕರ್ತರಿಗೆ ಮೋದಿ ಅವರೊಂದಿಗೆ ಸಂವಾದ ನಡೆಸುವ ಅವಕಾಶ ಸಿಗಲಿದೆ.
ಈ ಮೂರು ಟಾಸ್ಕ್ ಪೂರ್ಣಗೊಳಿಸಬೇಕು
ಹರ್ಘರ್ ವಿಕಾಸ್ ಫಲಾನುಭವಿಗಳ ಜೊತೆ ಸೆಲ್ಫಿ ತೆಗೆದು ಅಪ್ಲೋಡ್ ಮಾಡಬೇಕು, ಸಂಪರ್ಕ್ ಸೆ ಸಮರ್ಥನ್: ಕ್ಷೇತ್ರದ ಗಣ್ಯ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸಿ ಫೋಟೋ ಅಪ್ಲೋಡ್ ಮಾಡಬೇಕು , ಬದಲಾಗುತ್ತಿರುವ ಭಾರತದ ಮಾತು: ಫಲಾನುಭವಿಗಳ ವಿಡಿಯೋ ಅಪ್ಲೋಡ್ ಮಾಡಬೇಕು
NAMO App ಮೂಲಕ ಈ ಮೂರು ಟಾಸ್ಕ್ಗಳನ್ನು ಪೂರ್ಣಗೊಳಿಸಬೇಕು ಎಂದು ಬಿಜೆಪಿ ತಿಳಿಸಿದೆ.