ಸಹೋದರಿಯರ ಮೇಲೆ ಕಾಡಾನೆ ದಾಳಿ: ಓರ್ವ ಮಹಿಳೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಳ್ಳಂಬೆಳಗ್ಗೆ ರಾಮನಗರದಲ್ಲಿ ಘೋರ ದುರಂತ ಸಂಭವಿಸಿದೆ. ಕೆಲಸದ ನಿಮಿತ್ತ ತಮ್ಮ ಜಮೀನಿಗೆ ತೆರಳುತ್ತಿದ್ದ ಸಹೋದರಿಯರಿಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾನಗರ ಬಳಿ ಕಾಡಾನೆ ದಾಳಿ ನಡೆಸಿದ್ದು, ಜಯಮ್ಮ (50)ಮೃತಪಟ್ಟ ಮಹಿಳೆ. ಇವರ ಸಹೋದರಿ ವೆಂಕಟಲಕ್ಷ್ಮಮ್ಮ (45) ತೀವ್ರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೋಮವಾರ ಮುಂಜಾನೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಇಬ್ಬರೂ ಸಹೋದರಿಯರು ತಮ್ಮ ಜಮೀನಿಗೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಆನೆ ದಾಳಿ ಮಾಡಿದ್ದು, ಜಯಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡ ಸಹೋದರಿಯನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ನಡೆದ ಮೂರನೇ ಆನೆ ದಾಳಿ ಪ್ರಕರಣ ಇದಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!