ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರದಲ್ಲಿ ಮೇಜರ್ ಸರ್ಜರಿ ನಡೆದಿದ್ದು, 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಐಎಎಸ್ ಅಧಿಕಾರಿ ಜಾವೇದ್ ಅಖ್ತರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೆಡಿಕಲ್ ಎಜುಕೇಷನ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೊಣೆಗಾರಿಕೆ ವಹಿಸಿದೆ.
ಕೊಡಗು ಜಿಲ್ಲಾಧಿಕಾರಿಯಿಂದ ಬಿಸಿ ಸತೀಶ ಅವರನ್ನು ವರ್ಗಾವಣೆ ಮಾಡಿ, ಸುವರ್ಣ ಆರೋಗ್ಯ ಟ್ರಸ್ ಇಡಿಯಾಗಿ ನೇಮಿಸಿದೆ. ಹುದ್ದೆಯ ನಿರೀಕ್ಷೆಯಲ್ಲಿದ್ದ ಡಾ.ಗೋಪಾಲ್ ಕೃಷ್ಣ ಅವರನ್ನು ಕರ್ನಾಟಕ ಮುನಿಸಿಪಲ್ ಡಾಡಾ ಸೊಸೈಟಿಯ ಜೆಡಿ ಹುದ್ದೆಗೆ ನೇಮಕ ಮಾಡಿದೆ.
ಡಾ.ಶಿವಶಂಕರ್ ನ್ ಅವರನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಟ್ ನ ಎಂಡಿ ಸ್ಥಾನದಿಂದ ವರ್ಗಾವಣೆ ಮಾಡಿ, ಬೆಂಗಳೂರು ಗ್ರಾಮಾಂತರ ಡಿಸಿಯಾಗಿ ನೇಮಕ ಮಾಡಿದೆ. ಅಕ್ರಮ ಪಾಷ ಅವರನ್ನು ಲೇಬರ್ ಕಮೀಷನರ್ ಸ್ಥಾನದಿಂದ ವರ್ಗಾವಣೆಗೊಳಿಸಿ, ಕೋಲಾರದ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ.
ಗುಂಗು ಬಾಯ್ ರಮೇಶ್ ಮನಕರ್ ಅವರನ್ನು ರಾಜ್ಯ ಮಾಹಿತಿ ಹಕ್ಕು ಆಯೋಗದ ಕಮೀಷನರ್ ಆಗಿ ನೇಮಕ ಮಾಡಿದೆ. ಲತಾ ಆರ್ ಅವರನ್ನು ಬೆಂಗಳೂರು ಗ್ರಾಮಾಂತರ ಡಿಸಿ ಹುದ್ದೆಯಿಂದ ವರ್ಗಾವಣೆ ಮಾಡಿ, ಕರ್ನಾಟಕ ವುಮೆನ್ ಕಮೀಷನ್ ನ ಸೆಕ್ರೇಟರಿಯಾಗಿ ನೇಮಿಸಿದೆ.