SHOCKING | ಖಾಸಗಿ ಬಸ್ ಧಾವಂತಕ್ಕೆ ಯುವಕ ಬಲಿ

ಹೊಸದಿಗಂತ ವರದಿ ಕುಪ್ಪೆಪದವು:

ಖಾಸಗಿ ಬಸ್ ಗುದ್ದಿ ಯುವಕನೋರ್ವ ಸ್ಥಳದಲ್ಲೇ ಸಾವಿಗೀಡಾದ ಘಟನೆ ರಾಷ್ಟ್ರೀಯ ಹೆದ್ದಾರಿ 169 ರ ಗುರುಪುರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ಸಂತೋಷ (30) ಮೃತ ದುರ್ದೈವಿ. ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಕೆಲಸಕ್ಕಿರುವ ಸಂತೋಷ್ ಕೆಲಸಕ್ಕೆ ಹೋಗುತ್ತಿದ್ದಾಗ ಮೂಡಬಿದ್ರಿಯಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ ಗುದ್ದಿದ್ದು, ಬಸ್ ನ ಚಕ್ರಕ್ಕೆ ಬೈಕ್ ಸಿಲುಕಿದ್ದು ತಕ್ಷಣ ಸಂತೋಷ್ ನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಸಂತೋಷ್ ಮೃತಪಟ್ಟಿದ್ದರು. ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!