ವಿಜಯಪುರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಹೊಸದಿಗಂತ ವರದಿ ವಿಜಯಪುರ:

ವಿಜಯಪುರದಲ್ಲಿ ಇಂದು ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಶಾಕ್ ನೀಡಿದ್ದಾರೆ.

ಇಬ್ಬರು ಅಧಿಕಾರಿಗಳ ಮನೆ ಮೇಲೆ ನಾಲ್ಕು ಕಡೆಗಳಲ್ಲಿ ಲೋಕಾಯುಕ್ತರ ದಾಳಿ ನಡೆದಿದ್ದು, ಪರಿಶೀಲನೆ ಮಾಡಲಾಗುತ್ತಿದೆ.

ಪಿಡಬ್ಲ್ಯೂಡಿ ಇಲಾಖೆ ಜೆಇ ಭೀಮನಗೌಡ ಬಿರಾದಾರ ಮನೆ ಹಾಗೂ ಸಂಬಂಧಿ ಶ್ರೀಕಾಂತ್ ಅಂಗಡಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಪಿಡಬ್ಲ್ಯೂಡಿ ಇಲಾಖೆ ಬಸವನಬಾಗೇವಾಡಿ ವಿಭಾಗದಲ್ಲಿ ಪ್ರಭಾರಿ ಎಇಇ ಆಗಿ ಭೀಮನಗೌಡ ಬಿರಾದಾರ ಕಾರ್ಯನಿರ್ವಹಿಸುತ್ತಿದ್ದಾರೆ.

ವಿಜಯಪುರ ನಗರದ ಆರ್ ಟಿ ಓ ಕಚೇರಿ ಹಿಂಭಾಗದಲ್ಲಿ ಭೀಮನಗೌಡ ಬಿರಾದಾರ ಮನೆ ಇದೆ. ಅಲ್ಲದೇ ಮುದ್ದೇಬಿಹಾಳ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಸಿಸ್ಟೆಂಟ್ ಎಇಇ ಜೆಪಿ ಶೆಟ್ಟಿ ಮನೆಯ ಸ್ವಗ್ರಾಮವಾದ ಸಾಸನೂರನಲ್ಲಿರುವ ಮನೆ ಮೇಲೆ ವಿಜಯಪುರ ಲೋಕಾಯುಕ್ತ ಎಸ್ಪಿ ಅನಿತಾ ಹದ್ದನ್ನವರ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ನಾಲ್ಕು ಕಡೆಗಳಲ್ಲಿ 3 ಡಿವೈಎಸ್ಪಿ, 7 ಇನ್ಸಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!