ದುರಂತ ಘಟನೆ: ವಂದೇ ಭಾರತ್ ರೈಲಿಗೆ ಡಿಕ್ಕಿಯಾಗಿ ಓರ್ವ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ರೈಲು ವಾರಣಾಸಿಯಿಂದ ದೆಹಲಿಗೆ ತೆರಳುತ್ತಿರುವ ವೇಳೆ ತುಂಡ್ಲಾ ಬಳಿಯ ಜಲೇಸರ್ ಮತ್ತು ಪೋರಾ ಪಟ್ಟಣಗಳ ನಡುವೆ ಈ ದುರಂತ ಸಂಭವಿಸಿದೆ.

ವ್ಯಕ್ತಿಯೋರ್ವ ರೈಲ್ವೇ ಹಳಿ ದಾಟಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ ಘಟನೆಯ ಬಗ್ಗೆ ನಿಖರವಾದ ಮಾಹಿತಿಯು ತನಿಖೆಯ ನಂತರವೇ ತಿಳಿದುಬರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!