ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆ: ಬ್ಯಾಂಕ್ ಗೆ ಹಣ ಜಮೆಯಾಗಲು ಖಾತೆ ಜೊತೆ ಆಧಾರ್ ಲಿಂಕ್ ಕಡ್ಡಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್ ಅನ್ನಭಾಗ್ಯ ಯೋಜನೆಯ (Annabhagya Scheme) 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೀಗ ಈ ಹಣಕ್ಕಾಗಿ ಅಧಾರ್ ಲಿಂಕ್ (Aadhaar Card Link) ಕಡ್ಡಾಯವಾಗಿದೆ.

ಅನ್ನಭಾಗ್ಯದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಆಗಬೇಕಾದರೆ ಬ್ಯಾಂಕ್ ಖಾತೆ (Bank Account) ಜೊತೆ ಆಧಾರ್ ಲಿಂಕ್ ಕಡ್ಡಾಯವಾಗಿ ಆಗಿರಬೇಕು. ಬಿಪಿಎಲ್ (BPL Card) ಪಡಿತರ ಚೀಟಿಯನ್ನು ನೀವು ಹೊಂದಿರಬೇಕು. ಪಡಿತರ ಚೀಟಿಯಲ್ಲಿ (Ration Card) ಮನೆ ಮುಖ್ಯಸ್ಥರು ಯಾರು ಅನ್ನೋದು ಕಾರ್ಡ್ ನಲ್ಲಿ ನಮೂದಾಗಿರುತ್ತದೆ. ಮನೆಯ ಮುಖ್ಯಸ್ಥರು ಸಾಮಾನ್ಯವಾಗಿ ಮಹಿಳೆಯರೇ ಆಗಿರುತ್ತಾರೆ. ಮನೆ ಯಜಮಾನಿಯ ಹೆಸರಿನಲ್ಲಿ ಬ್ಯಾಂಕ್ ಅಕೌಂಟ್ ಖಾತೆ ಇರಬೇಕು .

ಒಂದು ವೇಳೆ ಮನೆಯ ಮುಖ್ಯಸ್ಥರದ್ದು ಇಲ್ಲದೇ ಹೋದಲ್ಲಿ, ಪಡಿತರ ಚೀಟಿಯಲ್ಲಿರುವ ಯಾವುದಾದ್ರೂ ಒಬ್ಬರ ಹೆಸರಿನಲ್ಲಿ ಖಾತೆ ಆಧಾರ್ ಲಿಂಕ್ ಆಗಿದ್ರೂ ಆಗುತ್ತೆ. ಧನಭಾಗ್ಯಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಕೆ ಮಾಡಬೇಕಿಲ್ಲ. ಆದರೆ ಆಧಾರ್ ಲಿಂಕ್ಡ್ ಬ್ಯಾಂಕ್ ಖಾತೆ ವಿವರ ಮಾತ್ರ ಕಡ್ಡಾಯವಾಗಿರುತ್ತದೆ.

ಆಹಾರ ಇಲಾಖೆ ಮಾಹಿತಿ ಪ್ರಕಾರ, ಸದ್ಯ 1.28 ಫಲಾನುಭವಿಗಳು ಇದ್ದು ಅದರಲ್ಲಿ 6 ಲಕ್ಷ ಖಾತೆದಾರರ ಆಕೌಂಟ್ ಸಮಸ್ಯೆ ಹಾಗೂ ಅಧಾರ್ ಲಿಂಕ್ ಆಗದೇ ಇರುವ ಸಮಸ್ಯೆ ಇದೆ. ಹೀಗಾಗಿ ಜುಲೈ 1 ನಲ್ಲಿ ಇವರಿಗೆ ದುಡ್ಡು ಕೊಡೋಕೆ ಸಮಸ್ಯೆಯಾಗಬಹುದು. ಅಕೌಂಟ್, ಆಧಾರ್ ಲಿಂಕ್ ಮಾಡಿಸಿದ ಬಳಿಕವಷ್ಟೇ ದುಡ್ಡು ನೇರವಾಗಿ ಡಿಬಿಟಿ ಮೂಲಕ ಜಮೆಯಾಗುತ್ತೆ ಅಂತಾ ಅಧಿಕಾರಿಗಳು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!