ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ವಿರುದ್ಧ ಮಾಜಿ ಸಚಿವ ಸುಧಾಕರ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಾಗೂ ಮಾಧ್ಯಮಗಳ ಸಂದರ್ಶನದಲ್ಲಿ ಮಾನಹಾನಿ ರೀತಿ ಮಾತು, ಸಾರ್ವಜನಿಕವಾಗಿ ಮಾನಹಾನಿ ಮಾಡುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ಮೂಲಕ ನನ್ನ ಘನತೆಗೆ ತೇಜೋವಧೆ ಮಾಡುತ್ತಾ ಇದ್ದಾರೆ. ಹೀಗಾಗಿ ಪ್ರದೀಪ್ ಈಶ್ವರ್ ವಿರುದ್ಧ ಕ್ರಮಕ್ಕೆ ಕೈಗೊಳ್ಳಿ ಎಂದಿದ್ದಾರೆ. ಅಲ್ಲದೆ ತನ್ನ ವಿರುದ್ಧ ಮಾತನಾಡದಂತೆ ನಿರ್ಬಂಧ ಹೇರಲು ಸುಧಾಕರ್ (K Sudhakar) ಮನವಿ ಮಾಡಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕೆ. ಸುಧಾಕರ್ ಅವರನ್ನು ಮಣಿಸಿ ಪ್ರದೀಪ್ ಈಶ್ವರ್ ಶಾಸಕರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!