ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಬುಲಾವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು, ಈ ಹಿನ್ನೆಲೆ ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಬಿಜೆಪಿ ಸಭೆಯಲ್ಲಿ ಬಿಎಸ್​ ಯಡಿಯೂರಪ್ಪ ಭಾಗವಹಿಸಲಿದ್ದು, ಬಳಿಕ ದೆಹಲಿಯಲ್ಲೇ ವಿಧಾನಸಭೆ, ವಿಧಾನಪರಿಷತ್ ವಿಪಕ್ಷ ನಾಯಕ, ಮುಖ್ಯ ಸಚೇತಕರ ಹೆಸರು ಘೋಷಣೆ ನಿರೀಕ್ಷೆ ಇದೆ.

ಮತ್ತೊಂದೆಡೆ ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದಂತ ಮಹತ್ವದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕೂಡ ರದ್ದುಗೊಂಡಿದೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!