ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು, ಈ ಹಿನ್ನೆಲೆ ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ನಾಳೆ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಬಿಜೆಪಿ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಭಾಗವಹಿಸಲಿದ್ದು, ಬಳಿಕ ದೆಹಲಿಯಲ್ಲೇ ವಿಧಾನಸಭೆ, ವಿಧಾನಪರಿಷತ್ ವಿಪಕ್ಷ ನಾಯಕ, ಮುಖ್ಯ ಸಚೇತಕರ ಹೆಸರು ಘೋಷಣೆ ನಿರೀಕ್ಷೆ ಇದೆ.
ಮತ್ತೊಂದೆಡೆ ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದಂತ ಮಹತ್ವದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕೂಡ ರದ್ದುಗೊಂಡಿದೆ ಎನ್ನಲಾಗುತ್ತಿದೆ.