ಅಜಿತ್ ಸೇರಿದಂತೆ ಇತರೆ 8 ಬಂಡಾಯ ನಾಯಕರ ವಿರುದ್ಧ ಎನ್‌ಸಿಪಿ ಅನರ್ಹತೆ ಅರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರದಲ್ಲಿ ಬಂಡಾಯದ ಬಾವುಟ ಹಾರಿಸಿದ ಅಜಿತ್ ಪವಾರ್ ಮತ್ತು ಇತರ 8 ಶಾಸಕರ ವಿರುದ್ಧ ಮಹಾರಾಷ್ಟ್ರದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಅನರ್ಹತೆ ಅರ್ಜಿ ಸಲ್ಲಿಸಲಾಯಿತು. ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ ಪವಾರ್ ಮತ್ತು ಇತರ 8 ಶಾಸಕರ ವಿರುದ್ಧ ತಮ್ಮ ಪಕ್ಷವು ಅನರ್ಹತೆ ಅರ್ಜಿ ಸಲ್ಲಿಸಿರುವುದಾಗಿ ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಸ್ಪಷ್ಟಪಡಿಸಿದರು.

ಎಲ್ಲಾ ಜಿಲ್ಲೆಗಳ ಪಕ್ಷದ ಕಾರ್ಯಕರ್ತರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪರವಾಗಿದ್ದಾರೆ ಎಂದು ಪಕ್ಷವು ಚುನಾವಣಾ ಆಯೋಗವನ್ನು ಸಂಪರ್ಕಿಸಿದೆ. ಎನ್‌ಸಿಪಿ ಮೂಲಗಳ ಪ್ರಕಾರ, ಶರದ್ ಪವಾರ್ ಅವರ ಸೂಚನೆಯ ಮೇರೆಗೆ ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರನ್ನು ಅನರ್ಹಗೊಳಿಸಲು ಅರ್ಜಿ ಸಲ್ಲಿಸಲಾಗಿದೆ.

ಭಾನುವಾರ ತಡರಾತ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಟೀಲ್, ಎನ್‌ಸಿಪಿಯಲ್ಲಿ ಶಾಸಕರ ಬಂಡಾಯ ಕುರಿತು ಜಯಪ್ರಕಾಶ ದಂಡೇಗಾಂವಕರ್ ನೇತೃತ್ವದ ಎನ್‌ಸಿಪಿ ಶಿಸ್ತು ಸಮಿತಿಗೆ ದೂರು ನೀಡಲಾಗಿದ್ದು, ಅವರ ಶಿಫಾರಸಿನ ಮೇರೆಗೆ 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿಯನ್ನು ಕಳುಹಿಸಲಾಗಿದೆ. ಪಕ್ಷಾಂತರದ ಬಗ್ಗೆ ನೇರವಾಗಿ ಜನರ ಬಳಿಗೆ ಹೋಗುತ್ತೇನೆ ಎಂದು ಶರದ್ ಪವಾರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!