ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಭಾರತದ ಕುಖ್ಯಾತ 15 ಕ್ರಿಮಿನಲ್ ಗಳನ್ನು ಅಂಡಮಾನ್ ಜೈಲಿಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಎನ್ಐಎ ಕ್ರಿಮಿನಲ್ ಗಳು ಮತ್ತು ಪಾತಕಿಗಳ ಸ್ಥಳಾಂತರಕ್ಕೆ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿತ್ತು, ಇದೀಗ ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ. ಶಿಕ್ಷೆಗೊಳಗಾದ ಕ್ರಿಮಿನಲ್ ಗಳನ್ನು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಜೈಲಿಗೆ ಸ್ಥಳಾಂತರಿಸಲು ಒಪ್ಪಿಗೆ ನೀಡಲಾಗಿದೆ.
ಉತ್ತರ ಭಾರತದ ಜೈಲಿನಲ್ಲಿರುವ ಕನಿಷ್ಠ 25 ಕ್ರಿಮಿನಲ್ಗಳನ್ನು ದಕ್ಷಿಣದ ರಾಜ್ಯಗಳಿಗೆ ವರ್ಗಾಯಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಗೃಹ ಸಚಿವಾಲಯಕ್ಕೆ ಮನವಿ ಮಾಡಿತ್ತು. ಮನವಿಗೆ ಸಚಿವಾಲಯ ಸಮ್ಮತಿ ಸೂಚಿಸಿದ್ದು, ಈಗ ಅಂಡಮಾನ್ ಜೈಲಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.