ಸಚಿವ ಸೆಂಥಿಲ್ ಬಾಲಾಜಿ ಬಿಡುಗಡೆ ಕೋರಿ ಅರ್ಜಿ, ವಿಭಜಿತ ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡಿನ ಸಚಿವ ವಿ.ಸೆಂಥಿಲ್‌ ಬಾಲಾಜಿ ಬಿಡುಗಡೆಗೆ ಪತ್ನಿ ಎಸ್ ಮೆಗಲಾ ಸಲ್ಲಿಸಿದ್ದ ಹೆಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ಮಂಗಳವಾರ ವಿಭಜಿತ ತೀರ್ಪು ಪ್ರಕಟಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಹೈಕೋರ್ಟ್‌ನ ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶಾನಲಯ ಸಚಿವ ಸೆಂಥಿಲ್ ಅವರನ್ನು ಬಂಧಿಸಿದೆ. ಪತಿಯ ಬಿಡುಗಡೆಗಾಗಿ ಪತ್ನಿ ಮದ್ರಾಸ್ ಹೈಕೋರ್ಟ್‌ಗೆ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಆದರೆ ಮದ್ರಾಸ್ ಹೈಕೋರ್ಟ್ ವಿಭಾಗಿಯ ಪೀಠ ಒಮ್ಮತದ ತೀರ್ಪು ನೀಡಿಲ್ಲ.

ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಜೆ ನಿಶಾ ಬಾನು ಹಾಗೂ ಡಿ ಭರತ್ ಚಕ್ರವರ್ತಿ ಅವರು ವಿಭಜಿತ ತೀರ್ಪು ನೀಡಿದ್ದಾರೆ. ಜಸ್ಟೀಸ್ ಭಾನು ಬಿಡುಗಡೆಗೆ ಸೂಚಿಸಿದ್ದರೆ, ಚಕ್ರವರ್ತಿ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!