ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಈಗಾಗಲೇ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ನಿರ್ಧಾರವಾಗಿದ್ದು,ಈ ಯೋಜನೆ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಂಜೆ ಚಾಲನೆ ನೀಡಲಿದ್ದಾರೆ. 15 ದಿನಗಳಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಚಿವರ ಪ್ರಕಾರ ರಾಜ್ಯದಲ್ಲಿ 4 ಸದಸ್ಯರನ್ನೊಳಗೊಂಡ 1.29 ಕೋಟಿ ಬಿಪಿಎಲ್ ಕಾರ್ಡ್ ಕುಟುಂಬಗಳಿದ್ದು ಒಟ್ಟು 41 ಕೋಟಿ ಫಲಾನುಭವಿಗಳಿದ್ದಾರೆ.