ಕೊಡವರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಹೊಸದಿಗಂತ ವರದಿ, ಮಡಿಕೇರಿ:

ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ. ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್( ಸಿಎನ್ ಸಿ)ನ ನಿಯೋಗ ಶನಿವಾರ ಅವರನ್ನು ಭೇಟಿ ಮಾಡಿದ ಸಂದರ್ಭ ಅವರು ಈ ಭರವಸೆ ನೀಡಿದ್ದಾರೆ.

ಕೊಡಗರು ಎಂದು ನಮೂದಾಗಿರುವ ಕೊಡವ ಸಮುದಾಯದ ಹೆಸರನ್ನು ಕೊಡವ ಎಂದು ತಿದ್ದುಪಡಿ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲು ಕೂಡಾ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಿಎನ್ ಸಿ ಅಧ್ಯಕ್ಷ ಎನ್.ಯು ನಾಚಪ್ಪ ಅವರ ನೇತೃತ್ವದ 30 ಜನರ ನಿಯೋಗದೊಂದಿಗೆ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಕೆ.ಟಿ. ಪೆಮ್ಮಯ್ಯ, ಉಪಾಧ್ಯಕ್ಷ ಕರ್ನಲ್ ವಿವೇಕ್ ಮುತ್ತಣ್ಣ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!