ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರನ್ನಾಗಿ ಡಾ.ಸಿ.ಎನ್. ಮಂಜುನಾಥ್ ಅವರನ್ನು ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜುಲೈ 19ಕ್ಕೆ ಡಾ.ಸಿ.ಎನ್.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು. ಆದರೆ ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ ಜವಾಬ್ದಾರಿ ಹಿನ್ನಲೆ ಜನವರಿ ತಿಂಗಳವರೆಗೆ ನಿರ್ದೇಶಕರಾಗಿ ಮುಂದುವರಿಯುವಂತೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಇಂದು ಜಯದೇವ ಸಂಸ್ಥೆಯ ಆಡಳಿತ ಮಂಡಳಿ ಜತೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸಭೆ ನಡೆಸಿದ್ದು, ಈ ವೇಳೆ ಜಯದೇವ ಆಸ್ಪತ್ರೆಯ ಅಭಿವೃದ್ಧಿ ಹಾಗೂ ನಿರ್ವಹಣೆ ಬಗ್ಗೆ, ಜಯದೇವ ಆಸ್ಪತ್ರೆ ನಿರ್ದೇಶಕರ ಆಯ್ಕೆ ಬಗ್ಗೆಯೂ ಚರ್ಚೆ ಮಾಡಲಾಯಿತು.
ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 2007ರಿಂದ ಡಾ.ಮಂಜುನಾಥ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷವೇ ಡಾ.ಮಂಜುನಾಥ್ ಅಧಿಕಾರ ಅವಧಿ ಮುಕ್ತಾಯವಾಗಿತ್ತು. ರೋಗಿಗಳು, ಸಿಬ್ಬಂದಿ ಒತ್ತಾಯದ ಮೇರೆಗೆ 1 ವರ್ಷ ಮುಂದುವರಿಸಲಾಗಿತ್ತು.
ಈ ಎಲ್ಲಾ ಚರ್ಚೆಯ ನಂತ್ರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಯದೇವ ಆಸ್ಪತ್ರೆಯ ನಿರ್ದೇಶ ಡಾ.ಸಿಎನ್ ಮಂಜುನಾಥ್ ಅವರ ಅಧಿಕಾರಾವಧಿಯನ್ನು ಮುಂದಿನ ಜನವರಿಯವರೆಗೆ ವಿಸ್ತರಿಸುವಂತ ನಿರ್ಧಾರವನ್ನು ಕೈಗೊಂಡರು. ಈ ಮೂಲಕ ಮುಂದಿನ ಆರು ತಿಂಗಳವರೆಗೆ ಡಾ.ಸಿಎನ್ ಮಂಜುನಾಥ್ ಅವರೇ ನಿರ್ದೇಶಕರಾಗಿ ಮುಂದುವರೆಯಲಿದ್ದಾರೆ.