ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ತಿಂಗಳು ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಪ್ರಫುಲ್ ಪಟೇಲ್, ಮಂಗಳವಾರ ದೆಹಲಿಯಲ್ಲಿ ನಡೆದ ಎನ್ಡಿಎ ಸಭೆಯಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಉಪಸ್ಥಿತರಿದ್ದರು.
ಸಭೆ ಬಳಿಕ ಮಾತನಾಡಿದ ಅವರು ಎನ್ಸಿಪಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅವಿಭಾಜ್ಯ ಅಂಗವಾಗಿದ್ದು, ಭವಿಷ್ಯದಲ್ಲಿ ತಮ್ಮ ಪಕ್ಷವು ಎನ್ಡಿಎ ಜೊತೆ ಕೆಲಸ ಮಾಡಲಿದೆ ಎಂದರು.
ಎನ್ಡಿಎ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ 38 ರಾಜಕೀಯ ಪಕ್ಷಗಳು ಉಪಸ್ಥಿತರಿದ್ದರು. ನಮ್ಮ ಕಡೆಯಿಂದ ಅಜಿತ್ ಪವಾರ್ ಅವರು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾಗಿ ತಿಳಿಸಿದರು.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಸುನೀಲ್ ತಟ್ಕರೆ ಅವರೊಂದಿಗೆ ಪ್ರಫುಲ್ ಪಟೇಲ್ ಮುಂಬೈನ ವೈಬಿ ಚವಾಣ್ ಸೆಂಟರ್ನಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಮತ್ತೆ ಎನ್ಸಿಪಿಯನ್ನು ಒಗ್ಗೂಡಿಸುವಂತೆ ಮನವಿ ಮಾಡಿದ್ದೇವೆ. ಆದರೆ ಅವರು ನಮ್ಮ ಮಾತನ್ನು ಕೇಳಿದರೂ ಕೇಳದಂತೆ ಸುಮ್ಮನಿದ್ದದ್ದು ಬೇಸರವಾಗಿದೆ ಎಂದರು.