ಸಾಲಬಾಧೆ ತಾಳಲಾರದೆ ನೇಣಿಗೆ ಶರಣಾದ ರೈತ

ಹೊಸ ದಿಗಂತ ವರದಿ, ವಿಜಯಪುರ:

ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣಿಗೆ ಶರಣಾಗಿರುವ ಘಟನೆ ನಗರದ ರೇಶ್ಮಿ ಕಾಲೋನಿಯಲ್ಲಿ ನಡೆದಿದೆ.

ಮೂಲತಃ ಜಿಲ್ಲೆಯ ಆಲಮೇಲ ನಿವಾಸಿಯಾಗಿದ್ದ ಸಾಯಬಣ್ಣ ಶಂಕರ ಓಲೇಕಾರ ಆತ್ಮಹತ್ಯೆಗೆ ಶರಣಾದ ರೈತ.

ಸಾಯಬಣ್ಣ ಓಲೇಕಾರ ಈತ ಬಿತ್ತನೆ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ಸಾಲ ಮಾಡಿಕೊಂಡಿದ್ದು, ಸಾಲಬಾಧೆ ತಾಳಲಾರದೆ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ.

ಈ ಸಂಬಂಧ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!