ಮಡಿಕೇರಿ-ಮಂಗಳೂರು ಹೆದ್ದಾರಿ ಸಂಚಾರಕ್ಕೆ ಮುಕ್ತ

ಹೊಸದಿಗಂತ ವರದಿ,ಮಡಿಕೇರಿ:

ಮಡಿಕೇರಿ -ಮಂಗಳೂರು ಹೆದ್ದಾರಿಯ ಮದೆನಾಡು ಸಮೀಪದ ಕರ್ತೋಜಿ ಬಳಿ ಹೆಚ್ಚಿನ ಮಳೆಯಿಂದಾಗಿ ಬೃಹತ್ ಮರ ಮತ್ತು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಸಾರಿಗೆ ಸಂಚಾರದಲ್ಲಿ‌ ವ್ಯತ್ಯಯ ಉಂಟಾಗಿತ್ತು.

ಈ ಸಂಬಂಧ ಉಪ ವಿಭಾಗಾಧಿಕಾರಿ ಡಾ.ಯತೀಶ್‌ ಉಲ್ಲಾಳ್, ತಹಶಿಲ್ದಾರರಾದ ಕಿರಣ್ ಗೌರಯ್ಯ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರು, ಅರಣ್ಯ ಇಲಾಖೆಯ ಸಿಬ್ಬಂದಿಯವರು, ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಾರಿಗೆ ಸಂಚಾರ ಕಲ್ಪಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!