ಕಸ್ತೂರಿ ರಂಗನ್ ವರದಿ ಜಾರಿ: ಸಚಿವ ಖಂಡ್ರೆ ಹೇಳಿಕೆಗೆ ಹೆಬ್ಬಾರ್ ಆಕ್ಷೇಪ

ಹೊಸದಿಗಂತ ವರದಿ,ಯಲ್ಲಾಪುರ:

ರಾಜ್ಯದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ರವರು ತರಾತುರಿಯಲ್ಲಿ ಡಾ. ಕೆ. ಕಸ್ತೂರಿ ರಂಗನ ವರದಿಯನ್ನು ಜಾರಿಗೊಳಸುವ ಬಗ್ಗೆ ತೀರ್ಮಾನಿಸಿರುವುದನ್ನು ನಾನು ಅತ್ಯಂತ ತೀವ್ರವಾಗಿ ವಿರೋದಿಸುತ್ತೇನೆ ಎಂದು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ.

ಈ ವರದಿ ಜಾರಿಯಿಂದ ಪಶ್ಚಿಮ ಘಟ್ಟಗಳನ್ನು ಒಳಗೊಂಡ ೧೦ ಜಿಲ್ಲೆಗಳ ಅಭಿವೃದ್ಧಿಯ ಹಾಗೂ ಪ್ರವಾಸೊದ್ಯಮದ ಮೇಲೆ ಅಗಾಧ ದುಷ್ಪರಿಣಾಮ ಬೀರಲಿದ್ದು, ಮಲೆನಾಡು ಹಾಗೂ ಕರಾವಳಯಂಚಿನ ನಿವಾಸಿಗಳಲ್ಲಿ ನಡುಕವನ್ನು ಉಂಟುಮಾಡಿದೆ.

ಈ ಹಿಂದಿನ ಕಾಂಗ್ರೆಸ್ ಸರ್ಕಾರ ಈ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು. ಹಾಗೂ ಈ ಹಿಂದಿನ ಸರ್ಕಾರದ ನೇತೃತ್ವದಲ್ಲಿ ರಾಜ್ಯದ ಸಂಸದರು ಹಾಗೂ ಶಾಸಕರನ್ನೊಳಗೊಂಡ ನಿಯೋಗವು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವರವನ್ನು ಭೇಟಿಯಾಗಿ ಈ ವರದಿಯ ಸಾಧಕ ಭಾಧಕಗಳ ಬಗ್ಗೆ ಅರಿವು ಮೂಡಿಸಿದ್ದರು ಹಾಗೂ ಯಥಾಸ್ಥಿತಿಯಲ್ಲಿ ಡಾ. ಕೆ. ಕಸ್ತೂರಿ ರಂಗನ ವರದಿಯನ್ನು ಜಾರಿಗೊಳಸಲು ಸಾಧ್ಯವಿಲ್ಲ ಎಂದು ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು.

ಇಂದಿನ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ರವರು ಈ ವರದಿಯ ಕುರಿತು ಸಂಪೂರ್ಣ ಅಧ್ಯಯನ ಮಾಡಿಕೊಳ್ಳಬೇಕು. ಮಲೆನಾಡಿನ ಪ್ರದೇಶದಿಂದ ಬಂದಿರುವ ನಮಗೂ ಸಹ ಅರಣ್ಯ ರಕ್ಷಣೆಯ ಬಗ್ಗೆ ಅತೀವ ಪ್ರೀತಿ ಹಾಗೂ ಕಾಳಜಿ ಇದೆ. ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಬದುಕು ಕಟ್ಟಕೊಂಡಿರುವ ಅನೇಕ ಬುಡಕಟ್ಟು ಜನಾಂಗಗಳ ಸಾಂಸ್ಕೃತಿಕ ಪರಂಪರೆಗಳು ಈ ವರದಿಯಿಂದ ನಶಿಸಿಹೋಗಲಿದೆ.

ಅರಣ್ಯ ಸಚಿವರು ಸಹಸ್ರಾರು ಬಡ ಕುಟುಂಬಗಳ ಜೀವನವನ್ನು ಸರ್ವನಾಶ ಮಾಡುವ ಈ ವರದಿಯನ್ನು ತರಾತುರಿಯಲ್ಲಿ ಜಾರಿಗೊಳಸದೇ ಪಶ್ಚಿಮಘಟ್ಟಗಳನ್ನು ಒಳಗೊಂಡಿರುವ ಪ್ರದೇಶಗಳ ಶಾಸಕರು ಹಾಗೂ ಸಂಸದರೊAದಿಗೆ ಈ ವರದಿಯ ಸಾಧಕ – ಭಾಧಕಗಳ ಕುರಿತು ವಿಸ್ತ್ರತವಾಗಿ ಚರ್ಚಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳಬೇಕು. ಹೀಗಾಗಿಯೂ ಈ ವರದಿಯನ್ನು ಜಾರಿಗೊಳಸುವುದಾದಲ್ಲಿ ಎಲ್ಲಾ ಹೋರಾಟಕ್ಕೆ ನಾವು ಸಿದ್ಧವಾಗಿದ್ದು, ಶಾಸಕರು ಹಾಗೂ ಸಂಸದರುಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮುಂದಿನ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!