ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿಧಿಸಿದ್ದ ಎರಡು ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಇಂದು ಸಂಸದ ಸ್ಥಾನದ ಅನರ್ಹತೆಯನ್ನು ತೆರವು ಮಾಡುವ ಸಾಧ್ಯತೆ ಇದೆ.
ಈ ಬಗ್ಗೆ ಇಂದು ಲೋಕಸಭೆ ಸ್ಪೀಕರ್ ನಿರ್ಧಾರ ಕೈಗೊಳ್ಳಲಿದ್ದು, ಸ್ಥಾನ ಮರಳಿಸುವ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರು ಅಧಿಕಾರಿಗಳ ಜತೆ ಮಾತನಾಡಿ ನಿರ್ಣಯ ಕೈಗೊಳ್ಳಲಿದ್ದಾರೆ.
ರಾಹುಲ್ ಗಾಂಧಿ ಐದು ವರ್ಷಗಳ ಹಿಂದೆ ಕೋಲಾರದ ಕಾರ್ಯಕ್ರಮವೊಂದರಲ್ಲಿ ಎಲ್ಲ ಕಳ್ಳರ ಸರ್ನೇಮ್ ಮೋದಿ ಎಂದು ಯಾಕೆ ಇರುತ್ತದೆ ಎಂದು ಟೀಕಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದರಿಂದಾಗಿ ಎರಡು ವರ್ಷ ಜೈಲು ಹಾಗೂ ಲೋಕಸಭಾ ಸದಸ್ಯತ್ವದಿಂದ ರಾಗಾ ಅವರು ಅನರ್ಹಗೊಂಡಿದ್ದರು.