ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಆರನೇ ದಿನವೂ ಮುಂದುವರೆದ ಎಎಸ್‌ಐ ಸಮೀಕ್ಷೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಆರಂಭಿಸಿರುವ ಸಮೀಕ್ಷೆಯು ಮುಂಗಳವಾರವೂ ಮುಂದುವರೆದಿದ್ದು, ಆರನೇ ದಿನಕ್ಕೆ ಕಾಲಿಟ್ಟಿದೆ.

ಸಹಾಯಕ ನಿರ್ದೇಶಕ ಅಲೋಕ್ ಕುಮಾರ್ ತ್ರಿಪಾಠಿ, ಸಂಜಯ್ ಮಹಂತಿ ನೇತೃತ್ವದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವಿಶೇಷ ತಂಡವು ಸಮೀಕ್ಷೆ ಮುಂದುವರಿಸಿದ್ದು, ಸಮೀಕ್ಷೆಗೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ಜ್ಞಾನವಾಪಿ ಮಸೀದಿ‌ ಸಂಕೀರ್ಣವನ್ನು ಈ ಮೊದಲು ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂಬ ಅರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸತ್ಯಾಂಶ ಬೆಳಕಿಗೆ ತರಲು ಹಿಂದೂ ಪರ ಸಂಘಟನೆಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಇದೀಗ ನ್ಯಾಯಾಲಯದ ಆದೇಶದಂತೆ ಭಾರತೀಯ ಪುರಾತತ್ವ ಇಲಾಖೆಯು ಆಗಸ್ಟ್‌ 4ರಂದು ಈ ವೈಜ್ಞಾನಿಕ ಸಮೀಕ್ಷೆ ಕೈಗೆತ್ತಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!