ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಶಾಹುನಗರದಲ್ಲಿ ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ದಾರುಣ ಅಂತ್ಯ ಕಂಡಿದ್ದಾರೆ.
ಬೋರ್ವೆಲ್ ಸ್ವಿಚ್ ಆನ್ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು, ಮೂವರು ಮೃತಪಟ್ಟಿದ್ದಾರೆ. ಈರಪ್ಪ ಗಂಗಪ್ಪ ರಾಥೋಡ್, ಪತ್ನಿ ಶಾಂತವ್ವ ಹಾಗೂ ಮೊಮ್ಮಗಳು ಅನ್ನಪೂರ್ಣ ವಿದ್ಯುತ್ ಅವಘಡದಲ್ಲಿ ಮೃತಪಟ್ಟಿದ್ದಾರೆ.
ನಿರ್ಮಾಣ ಹಂತದ ಮನೆಗೆ ವಾಚ್ಮೆನ್ ಆಗಿ ದಂಪತಿ ಕೆಲಸ ಮಾಡುತ್ತಿದ್ದರು. ಅನ್ನಪೂರ್ಣಳನ್ನು ಓದಿಸಲು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಸ್ವಿಚ್ ಆನ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.