ಇಡೀ ದೇಶ ಮಣಿಪುರದ ಜೊತೆಗಿದೆ, ಶಾಂತಿ ಸ್ಥಾಪನೆಗೆ ಕೇಂದ್ರ-ರಾಜ್ಯ ಸರ್ಕಾರ ಶ್ರಮಿಸುತ್ತಿದೆ: ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ಕೋಟೆಯಿಂದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕಲಹ ಪೀಡಿತ ಮಣಿಪುರದಲ್ಲಿ ಶಾಂತಿಗಾಗಿ ಮನವಿ ಮಾಡಿದರು, ದೇಶಾದ್ಯಂತ ಜನರು ಈಶಾನ್ಯ ರಾಜ್ಯದ ಜನರೊಂದಿಗೆ ನಿಂತಿದ್ದಾರೆ ಎಂಬ ಕಿವಿ ಮಾತು ಹೇಳಿದರು.

“ಇಡೀ ದೇಶವು ಮಣಿಪುರದ ಜನರೊಂದಿಗೆ ನಿಂತಿದೆ. ಎಲ್ಲಾ ವಿವಾದಗಳನ್ನು ಪರಿಹರಿಸಲು ಶಾಂತಿಯೊಂದೇ ಏಕೈಕ ಮಾರ್ಗವಾಗಿದೆ. ಮಣಿಪುರದಲ್ಲಿ ಶಾಂತಿ ಪುನಃ ಸ್ಥಾಪಿಸಲು ಕೇಂದ್ರ ಮತ್ತು ಮಣಿಪುರ ಸರ್ಕಾರವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಅತಿದೊಡ್ಡ ಪ್ರಜಾಪ್ರಭುತ್ವವು ಈಗ ಜನಸಂಖ್ಯೆಯ ವಿಷಯದಲ್ಲಿ ಜಗತ್ತನ್ನು ಮುನ್ನಡೆಸುತ್ತಿದೆ. ಅಂತ್ಯವಿಲ್ಲದ ಸಾಧ್ಯತೆಗಳನ್ನು ಹೊಂದಿರುವ ವಿಶಾಲ ದೇಶ ನನ್ನದು. ನನ್ನ ಕುಟುಂಬದ 140 ಕೋಟಿ ಸದಸ್ಯರು ಇಂದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದಾರೆ ಎಂದರು.

ದೇಶದ ಸ್ವಾತಂತ್ರ್ಯ ಹೋರಾಟದ ವೀರಯೋಧರಿಗೆ ನಮನ ಸಲ್ಲಿಸಿದ ಅವರು, ತಮ್ಮ ನೆಲದ ಮೇಲಿನ ಪ್ರೀತಿಯನ್ನು ಪ್ರದರ್ಶಿಸುವ ನಮ್ಮ ಎಲ್ಲಾ ನಾಗರಿಕರಿಗೆ ಮತ್ತು ದೇಶದ ಹೊರಗಿರುವ ಭಾರತೀಯರಿಗೂ ಧನ್ಯವಾದಗಳನ್ನು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!