ರಾಜ್ಯ ಸರ್ಕಾರದ ಅಸ್ತಿತ್ವದ ಕುರಿತು ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Swamiji) ಬುಧವಾರ ಭವಿಷ್ಯ ನುಡಿದಿದ್ದಾರೆ.

ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗುತ್ತಾ ಇದೆ. ಆದರೆ ಏನೂ ಆಗುವುದಿಲ್ಲ. ನೋಡೋರಿಲ್ಲ, ಕೇಳೋರಿಲ್ಲ, ಆನಂದ ಪಡುವವರಿಲ್ಲ ಎಂದು ಸ್ವಾಮೀಜಿ ಮಾರ್ಮಿಕವಾಗಿ ನುಡಿದಿದ್ದಾರೆ.ಈ ಮೂಲಕ ರಾಜ್ಯ ಸರ್ಕಾರಕ್ಕೆ ಏನು ತೊಂದರೆಯಿಲ್ಲ ಎಂದು ಕೋಡಿಮಠ ಸ್ವಾಮೀಜಿ ಅವರು ಭವಿಷ್ಯವನ್ನು ನುಡಿದಿದ್ದಾರೆ.

ಕರ್ನಾಟಕ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಕುರಿತು. ಸರ್ಕಾರಕ್ಕೆ ಏನು ತೊಂದರೆಯಿಲ್ಲ. ಆದ್ರೆ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಪಾರ್ಲಿಮೆಂಟ್ ಎಲೆಕ್ಷನ್‌ ಆದ್ಮೇಲೆ ತೀರ್ಮಾನ ಆಗುತ್ತದೆ. ಪಾರ್ಲಿಮೆಂಟ್ ಚುನಾವಣೆ ಬಂದಾಗ ಏನಾಗುತ್ತೆ, ದೇಶದಲ್ಲಿ ಯಾವ ಸರ್ಕಾರ ಬರುತ್ತೆ ಅಂತ ಹೇಳ್ತಿನಿ ಎಂದು ಕೋಡಿ ಮಠದ ಸ್ವಾಮೀಜಿ (Hassan Kodi mutt Shivananda Shivayogi Rajendra Swamiji prediction) ಹೇಳಿದರು.

ರಾಜ್ಯದಲ್ಲಿ ಮಳೆ ಬರಲಿದೆ ತೊಂದರೆ ಏನಿಲ್ಲ. ಹಿಂದೆ ಒಂದು ಸಾರಿ ಮಳೆ ಬಂದಂತೆ ಇನ್ನೊಂದು ಸಾರಿ ಮಳೆ‌ ಬರುತ್ತದೆ. ಮಳೆಗೇನು ತೊಂದರೆ ಆಗಲ್ಲ, ಕಾಲ‌ ಹೇಳ್ತಿನಿ, ಅಷ್ಟೇ ಮಳೆ‌ ಬರುತ್ತದೆ. ಅನ್ನಕ್ಕೆ ತೊಂದರೆ ಆಗುವುದಿಲ್ಲ. ಇನ್ನು ವಿಪರೀತ ಮಳೆಯಾಗುವ ಲಕ್ಷಣ ಇದೆ, ಬೇಕಾದಷ್ಟು ಮಳೆ ಬರುತ್ತದೆ. ಇನ್ನೂ ಮಳೆ, ಗುಡುಗು, ಭೂಮಿ ಬಿರುಕು ಆಗುವುದು, ದ್ವೇಷಗಳು ಹೆಚ್ಚುತ್ತವೆ, ಅಪಮೃತ್ಯು ಎಲ್ಲಾ ನಡೆಯುತ್ತದೆ. ಪ್ರಕೃತಿಯಿಂದಲೂ ಹಾನಿ ಇದೆ, ಶ್ರಾವಣದಲ್ಲೇ ಮಳೆಯ ಬಗ್ಗೆ ಎಲ್ಲರಿಗೂ ಗೊತ್ತಾಗುತ್ತದೆ. ಶ್ರಾವಣದ‌ ಮಧ್ಯಭಾಗದ ಮೇಲೆ ಕಾರ್ತಿಕದವರೆಗೂ ಮಳೆ ಆಗುತ್ತದೆ. ಮತ್ತೆ ಮಳೆಯಿಂದ ಅಪಾಯ ಆಗುವ ಲಕ್ಷಣಗಳಿವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!