ಸಾಹಿತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ: ಡಿಜಿಪಿಗೆ ಸೂಚನೆ ನೀಡಲಾಗಿದೆ ಎಂದ ಸಚಿವ ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾಹಿತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲು ಕಮಿಷನರ್, ಡಿಜಿಪಿ ಅವರಿಗೆ ಸೂಚನೆ ಕೊಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.

ಸಾಹಿತಿಗಳು ನನಗೆ ಸಮಯ ಕೇಳಿದ್ದಾರೆ. ಅವರಿಗೆ ಇಂದು ಸಮಯ ನೀಡಿದ್ದೇನೆ. ಈಗಾಗಲೇ ಅವರಿಗೆ ಭದ್ರತೆ ನೀಡಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅವರು ಕೊಟ್ಟಿರೋ ಪತ್ರ ಡಿಜಿಗೆ ಕಳಿಸಿಕೊಡ್ತಿದ್ದೇನೆ ಎಂದರು.

ಗೌರಿ ಲಂಕೇಶ್ (Gauri Lankesh) ಹತ್ಯೆ ಆಗಿದ್ದು ನಾವು ಮರೆತಿಲ್ಲ. ಇಂತಹ ಸಮಯದಲ್ಲಿ ಸಾಹಿತಿಗಳಿಗೆ ಬೆದರಿಕೆ ಬಂದಿದೆ. ನಾವು ಇದನ್ನ ಗಂಭೀರವಾಗಿ ಪರಿಗಣಿಸಿದ್ದೇವೆ. ಕಮಿಷನರ್ ಮತ್ತು ಡಿಜಿ ಅವರಿಗೆ ರಕ್ಷಣೆ ಕೊಡಲು ಸೂಚನೆ ಕೊಡ್ತಿದ್ದೇನೆ. ಬಹಳ ಗಂಭೀರವಾಗಿ ಈ ಪ್ರಕರಣ ತೆಗೆದುಕೊಳ್ತೀವಿ ಎಂದರು.

ಯಾರು ಬೆದರಿಕೆ ಹಾಕಿದ್ದಾರೆ ಗೊತ್ತಿಲ್ಲ. ಅವರು ಭೇಟಿ ಮಾಡಿದ ಮೇಲೆ ಯಾರು ಅಂತ ಗೊತ್ತಾಗಲಿದೆ. ಯಾರು ಅಂತ ಮಾಹಿತಿ ಪಡೆದು ಸೂಕ್ತ ಕ್ರಮ ತೆಗೆದುಕೊಳ್ತೀವಿ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!